ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎರಡನೇ ಹಂತದ ಮತದಾನಕ್ಕೆ ಕೇವಲ ಐದು ದಿನಗಳ ಬಾಕಿಯಿದ್ದು ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದಾರೆ.
ಇನ್ನು ಇದರ ಮಧ್ಯದಲ್ಲಿ ಕಾಂಗ್ರೆಸ್ನ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತರ ಮನೆ ಮೇಲೆ ಇಂದು ಗುರುವಾರ ಮೇ 02ರಂದು ಬೆಳ್ಳಂಬೆಳ್ಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ವಿರೋಧ ಪಕ್ಷದವರು ಸಂತ್ರಸ್ತೆಯರಿಗೆ ಧೈರ್ಯ ತುಂಬುವ ಕೆಲಸ ಮಾಡಲಿ: ಡಿಕೆಶಿ
ಹೌದು, ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಮಾಜಿ ಎಂಎಲ್ಸಿ ಎಂ.ಸಿ.ವೇಣುಗೋಪಾಲ್ಗೆ ಐಟಿ ಶಾಕ್ ಎದುರಾಗಿದೆ. ನಗರದ ಜೆ.ಪಿ.ನಗರದಲ್ಲಿರುವ ಎಂ.ಸಿ.ವೇಣುಗೋಪಾಲ್ ನಿವಾಸಕ್ಕೆ 15 ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಅವರಿಗೂ ಎಂ.ಸಿ.ವೇಣುಗೋಪಾಲ್ ಆಪ್ತರಾಗಿದ್ದಾರೆ.