ಶಿಕ್ಷಣ ಸಚಿವರ ಕಾರು ಅಪಘಾತ

ಶಿಕ್ಷಣ ಸಚಿವರ ಕಾರು ಅಪಘಾತ

ತುಮಕೂರು: ಕಾಂಗ್ರೆಸ್ ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿರುವಂತಹ ಮಧು ಬಂಗಾರಪ್ಪ ಅವರ ಕಾರು ಅಪಘಾತವಾಗಿದೆ ಎಂದು ತಿಳಿದುಬಂದಿದೆ.

ಕಾರ್ಯ ನಿಮಿತ್ತ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಸಚಿವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ಜಜ್ಜಿ ಹೋಗಿದೆ. ಬುಧವಾರ ತಡರಾತ್ರಿ ಅಪಘಾತ ನಡೆದಿದೆ.

ಅದೃಷ್ಟವಶಾತ್ ಅಪಘಾತ ಸಂದರ್ಭದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಮತ್ತು ಕಾರಿನಲ್ಲಿ ಇದ್ದವರಿಗೆ ಯಾವುದೇ ರೀತಿ ಗಾಯವಾಗಿಲ್ಲವೆಂದು ತಿಳಿದು ಬಂದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related