ಈದ್​ ಮಿಲಾದ್ ಗಲಾಟೆ​; ಜಮೀರ್ ಅಹ್ಮದ್ ಹೇಳಿದ್ದೇನು?

ಈದ್​ ಮಿಲಾದ್ ಗಲಾಟೆ​; ಜಮೀರ್ ಅಹ್ಮದ್ ಹೇಳಿದ್ದೇನು?

ಹಾಸನ: ಶಿವಮೊಗ್ಗದಲ್ಲಿ ಒಂದಲ್ಲ ಒಂದು ರೀತಿಯ ಹಿಂದೂ ಮುಸ್ಲಿಂ ಗಲಾಟೆಗಳು ನಡೆಯುತ್ತಲೇ ಇರುತ್ತವೆ ಇದು ನಮಗೆಲ್ಲರಿಗೂ ತಿಳಿದಿರುವ ವಿಷಯ.

ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು, ಈದ್ ಮಿಲಾದ್ ದಿನದಂದು ಮೆರವಣಿಗೆ ಸಂದರ್ಭದಲ್ಲಿ ಗಲಾಟೆಯಾಗಿದ್ದು ಇದರ ಬಗ್ಗೆ ಈಗಾಗಲೇ ತನಿಖೆ ಪ್ರಾರಂಭವಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ರವರು ತಿಳಿಸಿದ್ದಾರೆ.

ಈದ್​ ಮಿಲಾದ್​ ಮೆರವಣಿಗೆ ವೇಳೆ ಗಲಾಟೆ ಆಗಬಾರದಿತ್ತು, ಆಗಿದೆ. ಈಗ ಕಂಟ್ರೋಲ್‌ನಲ್ಲಿದ್ದು, ಏನು ಸಮಸ್ಯೆ ಇಲ್ಲ ಎಂದು ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಅವರು ‘ಬಿಜೆಪಿಯವರಿಗೆ ಹೇಳೋಕೆ ಏನು ಇಲ್ಲ. ಪ್ರತಿ ಸಲ, ಸಣ್ಣ-ಪುಟ್ಟ ಗಲಾಟೆಯಾದರೂ ಸಿ.ಟಿ.ರವಿ, ಈಶ್ವರಪ್ಪ ಆಗಲಿ, ಅದನ್ನು ಪಾಕಿಸ್ತಾನ ಮಾಡಲು ಹೊರಟ್ಟಿದ್ದಾರೆ ಎಂದರು.

‘ಅವರು ಜಿಲ್ಲಾಡಳಿತದಿಂದ ಅನುಮತಿ ಪಡೆದು ಔರಂಗಜೇಬ್ ಕಟೌಟ್ ಮೆರವಣಿಗೆ ಮಾಡಿದ್ದೀವಿ ಎಂದು ಹೇಳುತ್ತಿದ್ದಾರೆ. ಆದರೆ, ಪರ್ಮಿಷನ್ ಇಲ್ಲವೆಂದು ಮಾಧ್ಯಮದವರು ಹೇಳಿದ್ದಾರೆ. ಈಗ ಆ ಬಗ್ಗೆ ಚರ್ಚೆ ಬೇಡ. ಈಗ ಶಾಂತವಾಗಿದೆ. ಯಾವ ಸಮಸ್ಯೆನೂ ಇಲ್ಲ, ಎಲ್ಲಾ ಕಂಟ್ರೋಲ್‌ನಲ್ಲಿದೆ. ಪರ್ಮಿಷಮ್ ತಗೊಂಡಿರಿಲಿಲ್ಲ ಅಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳೋಣಾ. ಈ ಕುರಿತು ಮುಖ್ಯಮಂತ್ರಿಗಳು ನಿನ್ನೆಯೇ ಹೇಳಿದ್ದು, ‘ಯಾವುದೇ ಸಮಾಜದ ಮೆರವಣಿಗೆ ಮಾಡಬೇಕಾದರೆ ಕಲ್ಲು ತೂರಾಟ ಮಾಡುವುದು ತಪ್ಪು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ ಎಂದರು.

 

Related