ಮೈಸೂರು: ಚುನಾವಣೆಯಲ್ಲಿ ನನ್ನದು ತಟಸ್ಥ ನಿಲುವು. ಎಲ್ಲಾ ಪಕ್ಷದವರು ಬೆಂಬಲಕೇಳುತ್ತಿದ್ದಾರೆ, ನಾನು ಮಾತ್ರ ತಟಸ್ಥಳಾಗಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮುಂದಿನರಾಜಕೀಯ ನಿಲುವು ನಿರ್ಧಾರ ಮಾಡೋರು ಜನರು. ಮೊದಲು ಜನರ ಬಳಿ ಚರ್ಚೆ ಮಾಡುತ್ತೇನೆ. ನಂತರ ರಾಜಕೀಯ ನಿಲುವು ಸ್ಪಷ್ಟಪಡಿಸುತ್ತೇನೆ. ಕೇಂದ್ರ ವಾಕ್ ಮತ್ತು ಶ್ರವಣ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ. ಧ್ವನಿ ಹಾಗೂ ಕಿವಿ ಸಮಸ್ಯೆ ಇರುವ ಮಕ್ಕಳ ಸಮಸ್ಯೆ ಬಗೆಹರಿಸುತ್ತಿದ್ದಾರೆ.
ಇವರ ಸೇವೆಯನ್ನು ಮಂಡ್ಯಕ್ಕೂ ವಿಸ್ತರಣೆ ಮಾಡಬೇಕಿದೆ. ಅದಕ್ಕಾಗಿ ಅಧಿಕಾರಿಗಳೊಂದಿಗೆ ಮಾತನಾಡಲು ಬಂದಿದ್ದೆ. ಕಳೆದ 3 ತಿಂಗಳಿಂದ ಇಲ್ಲಿಗೆ ಬರಬೇಕೆಂದುಕೊಂಡಿದ್ದೆ. ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳ ಬಳಿ ಚರ್ಚೆ ಮಾಡಲಾಗಿದೆ ಎಂದರು.