ಬೆಂಗಳೂರು, ಫೆ.10 : ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿಎಂ ಬಿ ಎಸ್ ವೈ ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಇಂದು ರಾಜ್ಯಪಾಲರಿಗೆ ತಲುಪಿಸಿದ್ದರು.
ಭಾರಿ ಕುತೂಹಲ ಮೂಡಿಸಿದ್ದ ಜಲಸಂಪನ್ಮೂಲ ಖಾತೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ನೀಡಲಾಗಿದೆ. ಚಿಕ್ಕಬಳ್ಳಾಪುರ ಶಾಸಕರಾದ ಕೆ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಖಾತೆ, ಬಿ.ಸಿ ಪಾಟೀಲ್ ಅವರಿಗೆ ಅರಣ್ಯ ಇಲಾಖೆ, ಶ್ರೀಮಂತ ಪಾಟೀಲ್ ಅವರಿಗೆ ಜವಳಿ ಖಾತೆ ನೀಡಲಾಗಿದೆ. ಎಸ್. ಟಿ. ಸೋಮಶೇಖರ್ ಅವರಿಗೆ ಸಹಕಾರ ಖಾತೆ ನೀಡಲಾಗಿದ್ದು, ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಖಾತೆ, ನಾರಯಣ ಗೌಡ ಅವರಿಗೆ ಪೌರಾಡಳಿತ ಮತ್ತು ತೋಟಗಾರಿಕೆ ಖಾತೆ, ಕೆ. ಗೋಪಾಲಯ್ಯ ಅವರಿಗೆ ಸಣ್ಣ ಕೈಗಾರಿಕೆ ಖಾತೆ, ಹೊಸಪೇಟೆ ಶಾಸಕ ಆನಂದ್ ಸಿಂಗ್ ಗೆ ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಬೈರತಿ ಬಸವರಾಜ್ ಅವರಿಗೆ ನಗರಾಭಿವೃದ್ಧಿ ಖಾತೆ (ಬೆಂಗಳೂರು ಅಭಿವೃದ್ದಿ ಹೊರತುಪಡಿಸಿ) ನೀಡಲಾಗಿದೆ.