ಸೇರಿಗೆ ಸಮ ಸೇರು ಎನ್ನುತ್ತಿರುವ ಈಶ್ವರಪ್ಪ

ಸೇರಿಗೆ ಸಮ ಸೇರು ಎನ್ನುತ್ತಿರುವ ಈಶ್ವರಪ್ಪ

ಶಿವಮೊಗ್ಗ: ಸೇರಿಗೆ ಸಮ ಸೇರು ಎನ್ನುವ ಹಾಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸೆಡ್ಡು ಹೊಡೆದು ಈ ಬಾರಿ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇನ್ನು ಇದರ ಮತ್ತೊಂದು ಹೆಜ್ಜೆಯಾಗಿ ಇಂದು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಕಚೇರಿಯನ್ನು ಉದ್ಘಾಟನೆ ಮಾಡುವ ಮೂಲಕ ಬಿ ಎಸ್ ವೈ ಅವರ ಕುಟುಂಬಕ್ಕೆ ಸೆಡ್ಡು ಹೊಡೆದು ನಿಂತಿದ್ದಾರೆ.

ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಕೆ ಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಿದ ಕಾರಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.

ರಾಷ್ಟ್ರಭಕ್ತರ ಬಳಗದ ಅಭ್ಯರ್ಥಿಯಾಗಿ ಈಶ್ವರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಚೇರಿಗೆ ಶಿವಮೊಗ್ಗ ಲೋಕಸಭಾ ಚುನಾವಣೆ ಕಾರ್ಯಾಲಯ ಅಂತ ಹೆಸರಿಟ್ಟು ಪ್ರಧಾನಿ ಮೋದಿಯವರ ಪೋಟೋ ಬಳಸಿರುವುದು ಬಿಎಸ್ ಯಡಿಯೂರಪ್ಪ ಮತ್ತು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಮಗ ಬಿವೈ ರಾಘವೇಂದ್ರ ಅವರಿಗೆ ಸಾಕಷ್ಟು ಇರುಸು ಮುರುಸು ಉಂಟು ಮಾಡಿರಬಹುದು.

Related