ಸಂವಿಧಾನ ವಿರೋಧಿಯನ್ನು ಪ್ರತಿಯೊಬ್ಬರು ವಿರೋಧಿಸಬೇಕು; ಸಂತೋಷ್‌ ಲಾಡ್

ಸಂವಿಧಾನ ವಿರೋಧಿಯನ್ನು ಪ್ರತಿಯೊಬ್ಬರು ವಿರೋಧಿಸಬೇಕು; ಸಂತೋಷ್‌ ಲಾಡ್

ಧಾರವಾಡ ಸೆ.15: ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಕೆಲವು ಅನ್ಯ ಹಿತಾಸಕ್ತಿಗಳು ಸಂವಿಧಾನವನ್ನು ವಿರೋಧಿಸುತ್ತಿವೆ. ಸಂವಿಧಾನ ವಿರೋಧಿಗಳನ್ನು ಪ್ರತಿಯೊಬ್ಬರು ವಿರೋಧಿಸಬೇಕು. ಸಂವಿಧಾನದ ಪಾವಿತ್ರ್ಯತೆ, ಪ್ರಾಮುಖ್ಯತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಂವಿಧಾನದ ಅರಿವು ಎಲ್ಲರಿಗೂ ಅಗತ್ಯವಾಗಿದೆ. ಪ್ರತಿಯೊಬ್ಬರಿಗೂ ಸಮಾನತೆ, ಸೌಹಾರ್ದತೆ, ಭ್ರಾತೃತ್ವ, ಶಾಂತಿ, ನೆಮ್ಮದಿ ದೊರಕಲು ಸಂವಿಧಾನ ನೀಡಿರುವ ಅವಕಾಶಗಳು ಕಾರಣವಾಗಿವೆ . ಸಂವಿಧಾನದ ಪಾವಿತ್ರ್ಯತೆ, ಪ್ರಾಮುಖ್ಯತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಗುರುತರ ಜವಾಬ್ದಾರಿಯಾಗಿದೆ ಎಂದು ಸಚಿವರು ತಿಳಿಸಿದರು.

Related