ಬ್ರ್ಯಾಂಡ್ ಬೆಂಗಳೂರಿಗೆ ಅಭಿಪ್ರಾಯ/ಅನಿಸಿಕೆ/ಸಲಹೆಗಳನ್ನು ನೀಡುವ ಅವಧಿ ವಿಸ್ತರಣೆ

ಬ್ರ್ಯಾಂಡ್ ಬೆಂಗಳೂರಿಗೆ ಅಭಿಪ್ರಾಯ/ಅನಿಸಿಕೆ/ಸಲಹೆಗಳನ್ನು ನೀಡುವ ಅವಧಿ ವಿಸ್ತರಣೆ

ಬೆಂಗಳೂರು: ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆದ ಶ್ರೀ ಡಿ.ಕೆ.ಶಿವಕುಮಾರ್ ರವರು ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಮಾಡುವ ಉದ್ದೇಶದಿಂದ ಈಗಾಗಲೇ ಸರ್ವಪಕ್ಷ ಶಾಸಕರ ಜೊತೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿ ಅಭಿಪ್ರಾಯ/ಸಲಹೆಗಳನ್ನು ಪಡೆದಿರುತ್ತಾರೆ.

ಮುಂದುವರೆದು, ಬೆಂಗಳೂರಿನ ನಾಗರಿಕರು ಹಾಗೂ ಬೇರೆ ರಾಜ್ಯ/ದೇಶ/ ವಿದೇಶದಲ್ಲಿರುವಂತಹ ಎಲ್ಲಾ ವರ್ಗದ ನಾಗರಿಕರು ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ತಮ್ಮ ಅಭಿಪ್ರಾಯ/ಅನಿಸಿಕೆ/ಸಲಹೆಗಳನ್ನು ನೀಡುವ ಸಲುವಾಗಿ ದಿನಾಂಕ: 21-06-2023 ರಂದು ಪ್ರತ್ಯೇಕ ವೆಬ್ ಫೋರ್ಟಲ್ www.brandbengaluru.karnataka.gov.in ಬಿಡುಗಡೆಗೊಳಿಸಿ ದಿನಾಂಕ: 30-06-2023 ರವರೆಗೆ ನಾಗರಿಕರು ಅಭಿಪ್ರಾಯ/ಅನಿಸಿಕೆ/ಸಲಹೆಗಳನ್ನು ನೀಡುವಂತೆ ನಾಗರಿಕರಲ್ಲಿ ಕೋರಲಾಗಿತ್ತು.

ಅದರಂತೆ, ನಾಗರಿಕರಿಂದ ನಿರೀಕ್ಷೆಗೂ ಮೀರಿ ಅನಿಸಿಕೆ/ಸಲಹೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾಗರಿಕರು ನೀಡುವ ಅಭಿಪ್ರಾಯ/ಸಲಹೆಗಳ ಸಮೀಕ್ಷೆಯ ಅವಧಿಯನ್ನು ದಿನಾಂಕ: 30.06.2023 ರಿಂದ ದಿನಾಂಕ: 15.07.2023 ರವರೆಗೆ ವಿಸ್ತರಿಸಲಾಗಿದ್ದು, ಎಲ್ಲಾ ನಾಗರಿಕರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಸಮೀಕ್ಷೆಯಲ್ಲಿ ಪಾಲ್ಗೊಂಡು ಇನ್ನೂ ಹೆಚ್ಚು-ಹೆಚ್ಚು ಸಲಹೆಗಳನ್ನು ನೀಡುವ ಮೂಲಕ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಕೈ-ಜೋಡಿಸಬೇಕಾಗಿ ವಿನಂತಿಸುತ್ತೇನೆ ಎಂದರು.

ನಾಗರಿಕರು ವೆಬ್ ಪೋರ್ಟಲ್ www.brandbengaluru.karnataka.gov.in ಮೂಲಕ ಮಾತ್ರವಲ್ಲದೆ ವ್ಯಾಟ್ಸ್ಆಪ್ ಸಂಖ್ಯೆ: 9480685700 ಮೂಲಕವೂ ಅಭಿಪ್ರಾಯ/ ಅನಿಸಿಕೆ/ ಸಲಹೆಗಳನ್ನು ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ: 1533 ಗೆ ಕರೆಮಾಡಬಹುದಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

 

Related