ಜಿಲ್ಲಾ ನಿರ್ದೇಶಕರಿಗೆ ಬೀಳ್ಕೊಡುಗೆ

ಜಿಲ್ಲಾ ನಿರ್ದೇಶಕರಿಗೆ ಬೀಳ್ಕೊಡುಗೆ

ಶಿಡ್ಲಘಟ್ಟ: ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕರಾದ ವಸಂತ್ಬಿರವರಿಗೆ ಶಿಡ್ಲಘಟ್ಟದ ಶ್ರೀರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಬೀಳ್ಕೋಡುಗೆ ಸಮಾರಂಭ ನಡೆಯಿತು.
ಕಳೆದ 4 ವರ್ಷಗಳಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಧರ್ಮಸ್ಥಳದ ಪೂಜ್ಯರ ಜನಪರ ಕಾರ್ಯಕ್ರಮಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದರ ಜೊತೆಗೆ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಅಧಿಕಾರದ ಅಹಂ ಇಲ್ಲದೇ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಇದೀಗ ಕೇಂದ್ರ ಕಚೇರಿ ಧರ್ಮಸ್ಥಳದಲ್ಲಿ ಬಿ.ಸಿಸುವಿಧಾ ವಿಭಾಗದ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ಇವರನ್ನು ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಎಸ್. ವಿ. ನಾಗರಾಜರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಸದಸ್ಯರಾದ ಎಂ. ವಾಸುದೇವರಾವ್, ಬಿ. ಕೃಷ್ಣಮೂರ್ತಿ, ಆರ್. ಮಧುಸೂದನ್, ಎ. ಎಸ್. ರವಿ, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related