ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ

ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇದೀಗ ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ದೆಹಲಿಯ ಸಿಂಗು ಗಡಿ ಮತ್ತು ಹರ್ಯಾಣದ ಟಿಕ್ರಿಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಸೋಮವಾರ ಬೆಳಿಗ್ಗೆಯಿಂದ ರೈತರು ಸರದಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.

ದೇಶದಾದ್ಯಂತ  ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ಈ ಧರಣಿಯಲ್ಲಿ ಭಾಗಿಯಾಗುವಂತೆ ಅವರು ಕೇಳಿಕೊಂಡಿದ್ದಾರೆ. ಅಲ್ಲದೆ ರಾಷ್ಟ್ರದಾದ್ಯಂತದ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿ ಎಲ್ಲರೂ ಒಂದೇ ರೀತಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದರು.

Related