ಮೈಸೂರು : ನಾಳೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ರ್ಯಾಲಿಗೆ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಾಳೆಯ ಪ್ರತಿಭಟನೆಗಾಗಿ ಮೈಸೂರಿನಿಂದ ಟ್ರ್ಯಾಕ್ಟರ್, ಜೀಪು, ಬೈಕ್ ಹಾಗೂ ಎತ್ತಿನಗಾಡಿಗಳ ಮೂಲಕ ಸುಮಾರು 5 ಸಾವಿರಕ್ಕೂ ಹೆಚ್ಚು ರೈತರು ಬೆಂಗಳೂರಿಗೆ ತೆರಳುತ್ತೇವೆ ಎಂದು ಹೇಳಿದರು.