ಟಾಸ್ಕ್ ಫೋರ್ಸ್ ಕಮಿಟಿ ಸಭೆಯಲ್ಲಿ ಫೈನಲ್

ಟಾಸ್ಕ್ ಫೋರ್ಸ್ ಕಮಿಟಿ ಸಭೆಯಲ್ಲಿ ಫೈನಲ್

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿದ್ದ ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯವಾಗಿದ್ದು, ಕೊರೋನಾಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಸಭೆಯಲ್ಲಿ ಚರ್ಚೆ ಆಗಿದೆ.

ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಲಾಕ್‌ಡೌನ್ ಬಗ್ಗೆ ಸಹ ಚರ್ಚೆ ಆಗಿದ್ದು, ಕೊರೋನಾ ತಡೆಯಲು ಲಾಕ್‌ಡೌನ್ ಪರಿಹಾರ ಅಲ್ಲವೆಂದು ಸಭೆಯಲ್ಲಿ ಚರ್ಚೆ ಆಗಿದೆ. ಹೀಗಾಗಿ ಲಾಕ್ ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಭಾನುವಾರ ಮಾತ್ರ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ಸಿಎಂ ಮುಂದಿನ ಸೂಚನೆ ನೀಡುವ ತನಕ ಸಂಡೆ ಲಾಕ್‌ಡೌನ್ ಮುಂದುವರಿಯುತ್ತದೆ ಎಂದು ತಿಳಿಸಿದರು.

ದಕ್ಷಿಣ ಬೆಂಗಳೂರಿನಲ್ಲಿ ಹೆಚ್ಚಿನ ಸೋಂಕಿತರು ಇದ್ದಾರೆ. ಇದರಿಂದ ಕೋವಿಡ್ ಕೇರ್ ಸೆಂಟರ್‌ಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಇಂತಹ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡಿ ಅಂತ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.

Related