ಸಿನಿಮಾ ನಿರ್ಮಾಪಕ ವಿರುದ್ಧ ಎಫ್ಐಆರ್ ದಾಖಲು

ಸಿನಿಮಾ ನಿರ್ಮಾಪಕ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಕೆ. ಮಂಜು ವಿರುದ್ಧ ಹಣ ಪಡೆದು ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು, ಕೆ.ಮಂಜು ವಿರುದ್ಧ ಎಫ್ ಐಆರ್ ದಾಖಲಾಗಿದೆ.

ನಿರ್ಮಾಪಕ ಕೆ. ಮಂಜು 1.10 ಕೋಟಿ ರೂ. ಹಣ ಪಡೆದಿದ್ದಾರೆ. ಇನ್ನೋರ್ವ ಆರೋಪಿ ರಾಜಗೋಪಲ್ 68 ಲಕ್ಷ ಹಣ ಪಡೆದು ವಂಚಿಸಿದ್ದಾರೆ.
ಹಣ ವಾಪಸ್ ನೀಡುವಂತೆ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ಮಾಪಕ ಪುಟ್ಟರಾಜು ಎನ್ನುವವರು ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕೆ. ಮಂಜು ವಿರುದ್ಧ ದೂರು ದಾಖಲಿಸಿದ್ದಾರೆ.

Related