ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಆಹಾರ ಸಚಿವರ ಮತ ಬೇಟೆ

ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಆಹಾರ ಸಚಿವರ ಮತ ಬೇಟೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನೀಲ್ ಬೋಸ್ ಅವರ ಪರವಾಗಿ ಆರೋಗ್ಯ ಸಚಿವರಾಗಿರುವಂತಹ ಹೆಚ್ ಕೆ ಮುನಿಯಪ್ಪ ಅವರು ಮತ ಭೇಟಿ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಪಟ್ಟಣದ  ರಾಮಸಮುದ್ರ ಬಡಾವಣೆಯಲ್ಲಿ ಮನೆ ಮನೆಗೆ ತೆರಳುವ ಮೂಲಕ ಈ ಬಾರಿ ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕಾರದ ಎಆರ್ ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮರಿಸ್ವಾಮಿ,ಪರಿಷತ್ ನ ಡಾ.ತಿಮ್ಮಯ್ಯ, ಅಸ್ಕರ್ ಮುಣ್ಣ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related