ಬಿಜೆಪಿಯವರು ಇರುವುದೇ ಟೀಕೆ ಮಾಡುವುದಕ್ಕೆ: ರಾಘವೇಂದ್ರ ಹಿಟ್ನಾಳ್​

ಬಿಜೆಪಿಯವರು ಇರುವುದೇ ಟೀಕೆ ಮಾಡುವುದಕ್ಕೆ: ರಾಘವೇಂದ್ರ ಹಿಟ್ನಾಳ್​

ಕೊಪ್ಪಳ: 5 ಗ್ಯಾರಂಟಿಗಳು ರಾಜ್ಯದ ಜನರಿಗೆ ಉಪಯುಕ್ತವಾಗಲಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಹೇಳಿದ್ದಾರೆ. ಇನ್ನು ಬಿಜೆಪಿಯವರು ಟೀಕೆ ಮಾಡೋದು ಬಿಟ್ಟರೆ ಅವರಿಗೆ ಬೇರೆ ಕೆಲಸನೇ ಇಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದ ಈಗಾಗಲೇ ಮಹಿಳೆಯರಿಗೆ ಅನುಕೂಲ ಆಗಿದೆ. ಅನ್ನಭಾಗ್ಯ ಯೋಜನೆಯಿಂದ ಸಹ ಬಡವರಿಗೆ ಉಪಯೋಗ ಆಗುತ್ತೆ. ಟೀಕೆ ಮಾಡುವವರು ಅನ್ನಭಾಗ್ಯ ಫಲಾನುಭವಿಗಳಲ್ಲ ಎಂದು ಬಿಜೆಪಿ ವಿರುದ್ಧ ಶಾಸಕ ರಾಘವೇಂದ್ರ ಹಿಟ್ನಾಳ್ ಕಿಡಿಕಾರಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇರುವುದೇ ಟೀಕೆ ಮಾಡುವುದಕ್ಕೆ. ಎಲ್ಲಾ ಕಡೆ ಕೇಳಿದರೂ ಅಕ್ಕಿ ಸಿಕ್ಕಿಲ್ಲ, ಹೀಗಾಗಿ ಹಣ ನೀಡುತ್ತಿದ್ದೇವೆ ಎಂದು ಹೇಳಿದರು.

ಬಡವರು ನಮ್ಮ ಯೋಜನೆ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ‌. ಮುಂದೆ ಬರುವ ಚುನಾವಣೆಯಲ್ಲೂ ಬಿಜೆಪಿಗೆ ಜನ ಬುದ್ಧಿ ಕಲಿಸುತ್ತಾರೆ. ಬಿಜೆಪಿಯವರು ಏನು ಅವಾಂತರ ಮಾಡಿದ್ದಾರೆ ಅನ್ನೋದು ಗೊತ್ತು. ಕೇಂದ್ರದ ಬೆಲೆ ಏರಿಕೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದರು.

Related