ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ: ಲಕ್ಷ್ಮಣ ಸವದಿ

ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ: ಲಕ್ಷ್ಮಣ ಸವದಿ

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪಕ್ಷ ತರೋದು ಕಾಂಗ್ರೆಸ್ ಪಕ್ಷ ಸೇರಿಕೊಂಡು, ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಿಕೊಂಡು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಹುಮತದಿಂದ ಗೆದ್ದಿದ್ದಾರೆ.

ಇನ್ನು ಅಥಣಿ ಶಾಸಕ ಲಕ್ಷ್ಮಣ್ ಸವದಿಗೆ ಅವರಿಗೆ ಸಚಿವ ಸ್ಥಾನದ ವಿಚಾರದಲ್ಲಿ ಬಿಜೆಪಿ ನಾಯಕರು ಟೀಕಿಸಿದ್ದರಿಂದ ಬಿಜೆಪಿ ನಾಯಕರಿಗೆ ಶಾಸಕ ಲಕ್ಷ್ಮಣ್ ಸವದಿ ಅವರು ತಿರುಗೇಟು ನೀಡಿದ್ದಾರೆ

ಹೌದು, ಅಥಣಿ​ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆಯವ ಸಂಭಾವ್ಯ ಪಟ್ಟಿಯಲ್ಲಿ ಅಥಣಿ ಸಾಹುಕಾರ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಇದು ಹುಸಿಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ ಎಂದಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ ಎಂದರು.

 

Related