ಬಳ್ಳಾರಿ : ಗಣಿನಾಡಿನ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಬಸವರಾಜ್ ವಿರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಂಡೂರು ಪಟ್ಟಣದ ಬಾಡಿಗೆ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಗಾವತಿ ತಾಲೂಕು ಜಮಾಪುರ ಗ್ರಾಮದ ಬಸವರಾಜ್, ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ. ಸುಂದರ ವೈವಾಹಿಕ ಜೀವನ ನಡೆಸಬೇಕಾಗಿದ್ದ ಬಸವರಾಜ್ ಮದುವೆಯಾದ ಕೆಲವೇ ದಿನಗಳಲ್ಲಿ ದುಡುಕಿನ ನಿರ್ಧಾರಕ್ಕೆ ಶರಣುಯಾದರು.
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಸಂಬAಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.