ಆಪರೇಷನ್ ಹಸ್ತಕ್ಕೆ ಮಾಜಿ ಸಿಎಂ ಕೌಂಟರ್

ಆಪರೇಷನ್ ಹಸ್ತಕ್ಕೆ ಮಾಜಿ ಸಿಎಂ ಕೌಂಟರ್

ಹಾಸನ: ರಾಜ ರಾಜಕೀಯದಲ್ಲಿ ಆಪರೇಷನ್ ಹಸ್ತ ಮತ್ತು ಆಪರೇಷನ್ ಕಮಲ ಜೋರಾಗಿ ನಡೆಯುತ್ತಿದ್ದು, ಜೆಡಿಎಸ್ ನಾಯಕರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಮುಂದಾಗಿದೆ.

ಇನ್ನು ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ನಾಯಕರನ್ನು ಸೆಳೆಯಲು ಇಂದು ಸಭೆ ಕರೆದಿದ್ದಾರೆ

ಹೌದು, ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ. ಜೆಡಿಎಸ್ ಶಾಸಕರನ್ನೇ ಟಾರ್ಗೆಟ್ ಮಾಡಿರುವ ಡಿಕೆ ಬ್ರದರ್ಸ್, ಜೆಡಿಎಸ್ ಶಾಸಕರನ್ನ ಸೆಳೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಅತ್ತ ಡಿಕೆ ಬ್ರದರ್ಸ್ ನಾಗಲೋಟಕ್ಕೆ ಬ್ರೇಕ್ ಹಾಕಲು ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದು, ರೆಸಾರ್ಟ್ ರಾಜಕೀಯ ಶುರು ಮಾಡಿದ್ದಾರೆ. ಅದಕ್ಕೆ ಪುಷ್ಠಿ ಕೊಡುವಂತೆ 3 ದಿನಗಳ ಕಾಲ ಹಾಸನದ ಖಾಸಗಿ ರೆಸಾರ್ಟ್​​​​ನಲ್ಲಿ ಕುಮಾರಸ್ವಾಮಿ ಜೆಡಿಎಸ್ ಶಾಸಕರ ಸಭೆ ಮಾಡಲು ಮುಂದಾಗಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಹಾಸನದಲ್ಲಿ ಹಾಸನಾಂಬ ಜಾತ್ರೆ ನಡೆಯುತ್ತಿದೆ. ಹೀಗಾಗಿ ಇಂದು ಜೆಡಿಎಸ್‍ ಶಾಸಕರು ಹಾಸನಾಂಬೆಯ ದರ್ಶನ ಪಡೆಯಲು ಹೋಗುತ್ತಿದ್ದಾರೆ. ಹಾಸನಾಂಬೆಯ ದರ್ಶನದ ಜೊತೆಗೆ ಒಗ್ಗಟ್ಟಿನ ಸಂದೇಶ ನೀಡಲು ಹೆಚ್​​ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.

 

Related