ಮಾಜಿ ಸಿಎಂ ಹೈಕಮಾಂಡ್ ಬುಲಾವ್

ಮಾಜಿ ಸಿಎಂ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳು ಕಂಡು ಬರುತ್ತಿದ್ದು, ಇದೀಗ ಮಾಜಿ ಸಿಎಂ ಡಿವಿ ಸದಾನಂದ ಗೌಡರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಇದೇ ಅಕ್ಟೋಬರ್ 25ರಿಂದ ತಮ್ಮನ್ನು ಬಂದು ಭೇಟಿಯಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಅಕ್ಟೋಬರ್ 25ರಂದು ದೆಹಲಿಗೆ ತೆರಳಲು ಡಿವಿ ಸದಾನಂದಗೌಡರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಂತೆ. ಕೆಲ ದಿನಗಳ ಹಿಂದೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿವಿ ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು. ಈ ನಡುವೆ ಡಿವಿಎಸ್ ಕಾಂಗ್ರೆಸ್ ಸೇರ್ತಾರಾ ಅನ್ನೋ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಶುರುವಾಗಿವೆ.

ಈ ಎಲ್ಲಾ ಬೆಳವಣಿಗೆಗನ್ನು ಸೂಕ್ಷ್ಮವಾಗಿ ಗಮನಿಸಿರುವ ಬಿಜೆಪಿ ಹೈಕಮಾಂಡ್ ಡಿವಿ ಸದಾನಂದಗೌಡರರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ಈ ಮೂಲಕ ಡಿವಿ ಸದಾನಂದ ಗೌಡರ ಮುನಿಸನ್ನು ಶಮನ ಮಾಡೋ ಕಾರ್ಯಕ್ಕ ಹೈಕಮಾಂಡ್ ಮಂದಾದಂತೆ ಕಾಣಿಸುತ್ತಿದೆ.

 

Related