ವಿಜಯಪುರ ಜು16: ಪ್ರವಾಹ ಪೀಡಿತ ಪ್ರದೇಶಗಳಿಗೆ ನಿನ್ನೆ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರು ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿಗೆ ಹೋಗಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನೋಡಲು ಅಭಿಮಾನಿಗಳ ಬಳಗವೇ ಬಂದಿತ್ತು. ಈ ವೇಳೆ ಸಿದ್ದರಾಮಯ್ಯನವರಿಗೆ ಅಭಿಮಾನಿಗಳು ಹೂವಿನ ಹಾರ ಹಾಕಲು ಮುಂದಾಗಿದ್ದಾರೆ.
ಹೂವಿನ ಹಾರ ಹಾಕಲು ಬಂದ ಅಭಿಮಾನಿಗಳಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಹಾರದಲ್ಲಿ ಹುಳ ಇರುತ್ತಯ್ಯ, ಈ ಹೂವುಗಳನ್ನು ತರಬೇಡಿ, ಹಾರ ಹಾಕಬೇಡಿ ಎಂದು ಹೇಳಿದ್ದಾರೆ.