ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
74 ವರ್ಷದ ಇನಾಂದಾರ್ ಅವರು, ಲಂಗ್ಸ್ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಸಿರಸಂಗಿ ದೇಸಾಯಿ ಫೌಂಡೇಷನ್ ಟ್ರಸ್ಟ್ನ ಖಾಯಂ ಸದಸ್ಯರಾಗಿದ್ದರು.
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಬಾರಿಯೂ ಚುನಾವಣೆಯಲ್ಲೂ