ಬಿಜೆಪಿಗೆ ಪುರಸಭ ಮಾಜಿ ಅಧ್ಯಕ್ಷ

ಬಿಜೆಪಿಗೆ ಪುರಸಭ ಮಾಜಿ ಅಧ್ಯಕ್ಷ

ಬೇಲೂರು:ಬಿಜೆಪಿ ಪಕ್ಷಕ್ಕೆ ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಕಸಾಪ ಗೌರವ ಅಧ್ಯಕ್ಷ ಹೆಚ್.ಎಂ.ದಯಾನಂದ್ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.
ಹೆಚ್.ಎಂ.ದಯಾನಂದ್ಅವರ ನಿವಾಸಕ್ಕೆ ತೆರಳಿದ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್, ತಾಲೂಕು ಅಧ್ಯಕ್ಷ ಅಡಗೂರು ಆನಂದ್ ಅವರು ಹೆಚ್.ಎಂ.ದಯಾನಂದ್ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಗಣೇಶ್, ಪ್ರದೀಪ್, ಬಿ.ಬಿ.ಶಿವರಾಜು, ರವಿ ಹೊಳ್ಳ, ಜಗದೀಶ್, ಶ್ರೀನಿವಾಸ್ ಅವರನ್ನು ಪಕ್ಷದ ಶಾಲು ಹಾಕುವ ಮೂಲಕ ಅವರನ್ನು ಬಿಜೆಪಿ ಪಕ್ಷಕ್ಕೆ ಆಹ್ವಾನಿಸಿದರು.

ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ಮಾತನಾಡಿ, ನಮ್ಮ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಇತರೆ ಪಕ್ಷದ ಹಲವಾರು ಕಾರ್ಯಕರ್ತರು ಸೇರ್ಪಡೆಗೊಳ್ಳುತ್ತಿದ್ದಾರೆ. ಇದೀಗ ಪುರಸಭೆ ಹಾಗೂ ಕಸಾಪ ಮಾಜಿ ಅಧ್ಯಕ್ಷರೂ ಆದ ಹೆಚ್.ಎಂ.ದಯಾನಂದ್ ಬಂದಿರುವುದು ಹೆಚ್ಚಿನ ಶಕ್ತಿ ಬಂದಂತಾಗಿದೆ.
ತಾಲೂಕು ಬಿಜೆಪಿ ಅಧ್ಯಕ್ಷ ಅಡಗೂರು ಆನಂದ್ ಮಾತನಾಡಿ, ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಸಾಪದ ಗೌರವ ಅದ್ಯಕ್ಷರಾದ ಹೆಚ್.ಎಂ.ದಯಾನಂದ್ ಅವರು ಪಕ್ಷಕ್ಕೆ ಬಂದಿರುವುದು ಪಟ್ಟಣದಲ್ಲಿ ನಮ್ಮ ಪಕ್ಷಕ್ಕೆ ಬಲ ಬಂದಿದೆ ಎಂದರು.

Related