ಒಂದೇ ಕುಟುಂಬದ ನಾಲ್ವರು ಭೀಕರ ಸಾವು..!

  • In Crime
  • July 21, 2022
  • 341 Views
ಒಂದೇ ಕುಟುಂಬದ ನಾಲ್ವರು ಭೀಕರ ಸಾವು..!

ಉಡುಪಿ, ಜುಲೈ 20 : ಜಿಲ್ಲೆಗೆ ಬುಧವಾರ ಕರಾಳ ಬುಧವಾರವಾಗಿ ಮಾರ್ಪಾಟಾಗಿದೆ. ಬೆಳಗ್ಗಿನ ವೇಳೆಗೆ ಚಾಕಲೇಟ್ ನಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದರೆ ಸಂಜೆಯ ವೇಳೆಗೆ ಆಂಬುಲೆನ್ಸ್ ಒಂದು ಭೀಕರವಾಗಿ ಅಫಘಾತವಾಗಿ ಒಂದೇ ಕುಟುಂಬದ ನಾಲ್ವರು ಮೃತರಾಗಿದ್ದಾರೆ. ಅಂಬುಲೆನ್ಸ್ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,ಎಂತವರ ಹೃದಯವೂ ನಡುಗಿಸುವಂತಿದೆ.


ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ವೇಗವಾಗಿ ಬಂದ ಅಂಬುಲೆನ್ಸ್ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಭೀಕರ ಅಫಘಾತವಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಆಂಬುಲೆನ್ಸ್ ಚಾಲಕ ಸಹಿತ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಿವಾಸಿಗಳಾದ ಒಂದೇ ಕುಟುಂಬದ ಲೋಕೇಶ್ ಮಾಧವ ನಾಯ್ಕ, ಜ್ಯೋತಿ ಲೋಕೇಶ್ ನಾಯ್ಕ್, ಮಂಜುನಾಥ ಮಾಧವ ನಾಯ್ಕ, ಗಜಾನನ ಲಕ್ಷ್ಮಣ್ ನಾಯ್ಕ್ ಮೃತಪಟ್ಟವರು ಎಂದು ಗುರತಿಸಲಾಗಿದೆ. ಮೃತರ ಸಂಬಂಧಿಗಳಾದ ಗೀತಾ ಗಜಾನನ ನಾಯ್ಕ್, ಶಶಾಂಕ್ ಮತ್ತು ಟೋಲ್ ಗೇಟ್ ಸಿಬ್ಬಂದಿ ಶಂಬಾಜಿ ಪೋರ್ಪಡೆ ಸ್ಥಿತಿ ಗಂಭೀರವಾಗಿದೆ.

Related