ಬಿ ಎಸ್ ವೈಗೆ ಮತ್ತಷ್ಟು ಸಂಕಷ್ಟ

ಬಿ ಎಸ್ ವೈಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತ ಬಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತು ಇತರ ಮೂರು ಆರೋಗ್ಯಗಳಿಗೆ ನಗರದ ವಿಶೇಷ ನ್ಯಾಯಾಲಯ ಮನ್ಸನ್ ಜಾರಿಗೊಳಿಸುತ್ತಿದೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ..!

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಗುರುವಾರ ವಿಚಾರಣೆ ನಡೆಸಿ ಸಮನ್ಸ್ ಜಾರಿಗೊಳಿಸಲು ಆದೇಶಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಬಿ.ಎಸ್‌.ಯಡಿಯೂರಪ್ಪ, ಅವರ ಸಹಚರರಾದ ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ.ಮರಿಸ್ವಾಮಿ ಅವರು ಜು.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.

 

 

Related