ಗಣೇಶೋತ್ಸವ ಅನುಮತಿ ?

ಗಣೇಶೋತ್ಸವ ಅನುಮತಿ ?

ಗದಗ : ಹಿಂದೂಗಳ ಬಹುದೊಡ್ಡ ಹಬ್ಬವಾಗಿರುವ ಗಣೇಶ ಚತುರ್ಥಿ ಆಗಸ್ಟ್ 22ರಂದು ಬರಲಿದ್ದು, ಈಗಾಗಲೇ ಸಾವಿರಾರು ಕಲಾವಿದ ಕುಟುಂಬಗಳು ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿವೆ.

ರಾಜ್ಯ ಸರ್ಕಾರ ಕೂಡಲೇ ಗಣೇಶೋತ್ಸವ ಆಚರಣೆ, ಗಣೇಶ ಪ್ರತಿಷ್ಠಾಪನೆ ಕುರಿತು ಸ್ಪಷ್ಟ ನಿರ್ದೇಶನ ನೀಡುವಂತೆ ಜಿಲ್ಲಾ ಗಣೇಶ ಮೂರ್ತಿ ತಯಾರಕರ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಭರಡಿ ಒತ್ತಾಯಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ಎಲ್ಲ ಜಿಲ್ಲಾ ಹಾಗೂ ತಾಲೂಕು, ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ತಕ್ಷಣವೇ ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ನಡುವೆ ಈ ಬಾರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡುವ ಕುರಿತು ಗಾಳಿಸುದ್ದಿಗಳು ಹರಡಿದ್ದು, ಗಣೇಶ ಮೂರ್ತಿ ತಯಾರಕರ ಹಿತವನ್ನೂ ಸರ್ಕಾರ ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಗಣೇಶೋತ್ಸವ ಆಚರಣೆಯ ಮಾರ್ಗಸೂಚಿಗಳನ್ನು ಬಿಡುಗಡಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Related