ರಾಜ್ಯ ಬಜೆಟ್‌ಗೆ ಸಿದ್ಧತೆ ಶುರು!

ರಾಜ್ಯ ಬಜೆಟ್‌ಗೆ ಸಿದ್ಧತೆ ಶುರು!

ಬೆಂಗಳೂರು : ಕರ್ನಾಟಕ ರಾಜ್ಯ ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದು, ಮಾರ್ಚ್ ಮೊದಲ ವಾರದಲ್ಲಿ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಿಳಿಸಿದ್ದಾರೆ.

ದಾವಣಗೆರೆ ಹರಿಹರದ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಬಜೆಟ್ ಕುರಿತು ಪ್ರಸ್ತಾಪಿಸಿದರು.

ರಾಜ್ಯ ಬಜೆಟ್‌ಗೆ ಸಿದ್ಧತೆ ನಡೆಸಲು ಈಗಾಗಲೇ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಒಳಗೊಂಡಂತೆ ಎಲ್ಲಾ ಕ್ಷೇತ್ರಗಳಿಂದ ಮಾಹಿತಿಗಳನ್ನು ಪಡೆಯಲಾಗುತ್ತಿದೆ” ಎಂದು ತಿಳಿಸಿದರು.

ಕಳೆದ ಒಂದು ವರ್ಷದಿಂದಲೂ ಕೊರೊನಾ  ಸೋಂಕಿನಿಂದಾಗಿ  ರಾಜ್ಯದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಸದ್ಯದ ಆರ್ಥಿಕ ಸ್ಥಿತಿಗತಿಯನ್ನಾ ಧರಿಸಿ ಉತ್ತಮ ಬಜೆಟ್ ಮಂಡಿಸುವ ತಯಾರಿ ನಡೆಯುತ್ತಿದೆ. ಶೀಘ್ರವೇ ನಿಖರ ದಿನಾಂಕವನ್ನು ಘೋಷಿಸಲಾಗುವುದು ಎಂದು ಹೇಳಿದರು.

Related