ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಪಕ್ಷಕ್ಕೆ ಮತ ನೀಡಿ : ಮಂಜುಳಾ

ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಪಕ್ಷಕ್ಕೆ ಮತ ನೀಡಿ : ಮಂಜುಳಾ

ಕೆ.ಆರ್.ಪುರ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ರಂಗು ಪ್ರತಿಕ್ಷಣ ರಂಗೇರುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದರೂ ಸಹ ವಿಧಾನಸಭಾ ಚುನಾವಣೆಯ ಪ್ರಯುಕ್ತ ಎಲ್ಲ ಪಕ್ಷದ ಅಭ್ಯರ್ಥಿಗಳು ಮಳೆಯನ್ನು ಲೆಕ್ಕಿಸದೆ ಪ್ರಚಾರವನ್ನು ಮುಂದುವರಿಸುತ್ತಿದ್ದಾರೆ.

ಅದರಂತೆ ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಮಂಜುಳಾ ಅರವಿಂದ್ ಲಿಂಬಾವಳಿಯವರು ಮತಯಾಚನೆ ಮಾಡುತ್ತಿದ್ದಾರೆ.

ಮಹದೇವಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅವರು ತಿಳಿಸಿದರು.

ಸರ್ವಜನಾಂಗ ಅಭಿವೃದ್ಧಿ ನಮ್ಮ ಧ್ಯೇಯ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಹಾಗೂ ಡಬಲ್ ಇಂಜಿನ್ ಸರ್ಕಾರದ ಮಹತ್ತರ ಯೋಜನೆಗಳಿಗಾಗಿ ಬಿಜೆಪಿ ಪಕ್ಷಕ್ಕೆ ಮತ ನಿಡುವಂತೆ ಮನವಿಮಾಡಿದರು.

ನಮ್ಮ ಬೂತ್ ಗೆದ್ದರೆ ನಮ್ಮ ಕ್ಷೇತ್ರ ಗೆದ್ದಂತೆ ಈ ನಿಟ್ಟಿನಲ್ಲಿ ನಿಮ್ಮ ಬೂತ್ ಗಳಲ್ಲಿ ಮುನ್ನಡೆ ನೀಡುವಂತೆ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಸಲಹೆ ನೀಡಿದರು.

ಮಹದೇವಪುರ ಕ್ಷೇತ್ರದ ಕುರುಡುಸೊಣ್ಣೇನಹಳ್ಳಿ,ಕೆ. ದೊಮ್ಮಸಂದ್ರ, ಬೆಳತೂರು, ಕುಂಬೇನಾಗ್ರಹಾರ, ವಿಜಯಲಕ್ಷ್ಮಿ ಕಾಲೋನಿ, ಕಾಡುಗೋಡಿ, ದಿನ್ನೂರು ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು.

ಗ್ರಾಮ ಪಂಚಾಯತಿಗಳ ಸರ್ವತೋಮುಖ ಬೆಳವಣಿಗೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಪಡಿಸಲು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

ಮಹದೇವಪುರ ಕ್ಷೇತ್ರದ ಎಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದ ಕನ್ನಡಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ಅನೀಲ್, ಮಲ್ಲಿಕಾರ್ಜುನ, ಕೇಶವ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

Related