ಮೂಲಭೂತ ಸೌಲಭ್ಯಗಳಿಗೆ ಆದ್ಯತೆ

ಮೂಲಭೂತ ಸೌಲಭ್ಯಗಳಿಗೆ ಆದ್ಯತೆ

ಮಾನ್ವಿ : ತಾಲೂಕಿನಾದ್ಯಂತ ರಸ್ತೆ ಡಾಂಬರೀಕರಣ ಕಾಮಗಾರಿಗೆ ಹಾಗು ಗ್ರಾಮೀಣ ಭಾಗದ ಸಿಸಿ ರಸ್ತೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ತಾಲೂಕಿನ ಜಾನೇಕಲ್ ಗ್ರಾಮದಲ್ಲಿ ಯೋಜನೆಯಡಿ 4.ಕೋಟಿ ವೆಚ್ಚದ ಡಾಂಬರೀಕರಣ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ರಾಜಾವೆಂಕಟಪ್ಪನಾಯಕ ಚಾಲನೆ ನೀಡಿ ಮಾತನಾಡಿದ ಅವರು, ನಗರಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮಿಣ ಪ್ರದೇಶದ ವಿವಿಧ ರಸ್ತೆಗಳ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ತಾಲೂಕಿನಾದ್ಯಂತ ಸರ್ವತೋಮುಖ ಅಭಿವೃದ್ಧಿಗೆ ಅದ್ಯತೆ ನೀಡಲಾಗುವುದು ಎಂದರು.

Related