ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್

ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಬಿಎಸ್ ಯಡಿಯೂರಪ್ಪ ಅವರು ಜೂನ್. 14ರವರೆಗೆ ಮಾಡಿದ್ದಲ್ಲದೇ, 500 ಕೋಟಿ ವಿಶೇಷ 2ನೇ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಬೀದಿ ಬದಿಯ ವ್ಯಾಪಾರಿಗಳಿಗೂ 2000 ರೂ. ಆರ್ಥಿಕ ಪರಿಹಾರವನ್ನು ಘೋಷಿಸಿದ್ದರು. ಇಂತಹ ವಿಶೇಷ ಆರ್ಥಿಕ ಪ್ಯಾಕೇಜ್ ಹಣ, ಬೀದಿ ಬದಿಯ ವ್ಯಾಪಾರಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಇಂದಿನಿಂದ  ಜಮೆ ಆಗಲಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ, ಬೀದಿ ಬದಿಯ ವ್ಯಾಪಾರಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಹಣ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ.

ಈ ಮೂಲಕ 2.20 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಡಿಬಿಟಿ ಮೂಲಕ, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಇಂದಿನಿAದ ಜಮೆಗೊಳ್ಳಲಿದೆ.
ಇಂತಹ ಹಣವನ್ನು ಬೀದಿ ಬದಿಯ ವ್ಯಾಪಾರಿಗಳ ಖಾತೆಗೆ ಡಿಬಿಟಿ ಮೂಲಕ, ಇಂದಿನಿAದ ಜಮೆ ಮಾಡೋದಕ್ಕೆ ಶುರುವಾಗಲಿದೆ. ಈ ಮೂಲಕ ಸಿಹಿಸುದ್ದಿ ದೊರೆಯಲಿದೆ.

Related