ಶಿಕ್ಷಕರಿಗೆ ಗುಡ್ ನ್ಯೂಸ್ ಸಚಿವ

ಶಿಕ್ಷಕರಿಗೆ ಗುಡ್ ನ್ಯೂಸ್ ಸಚಿವ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿದರು.

ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ವೃತ್ತಿ ಶಿಕ್ಷಕರು ಮತ್ತು ಶಿಕ್ಷಕರ ಸಮಸ್ಯೆಗಳ ಬಗೆಹರಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ವಿಲೀನವಾಗದೆ ಬಾಕಿ ಉಳಿದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 28  ಬೋಧಕೇತರ  ಸಿಬ್ಬಂದಿ,  11 ಭಾಷಾ  ಉಪನ್ಯಾಸಕರು  ಕಾರ್ಯನಿರ್ವಹಿಸುತ್ತಿದ್ದು  ಇವರ  ಸೇವೆ  ವಿಲೀನಗೊಳಿಸುವ  ಕುರಿತು  ಪ್ರಸ್ತಾವನೆ  ಸಲ್ಲಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸಚಿವರು ಸೂಚನೆ ನೀಡಿದರು.

Related