ಸಮುದಾಯಗಳ ಬೇಡಿಕೆಗೆ ಸರ್ಕಾರ ಕಾನೂನಾತ್ಮಕ ಕ್ರಮ

ಸಮುದಾಯಗಳ ಬೇಡಿಕೆಗೆ ಸರ್ಕಾರ ಕಾನೂನಾತ್ಮಕ ಕ್ರಮ

ವಿಜಯಪುರ : ಸಮುದಾಯಗಳು ಮೀಸಲು ಬೇಡಿಕೆ ಕುರಿತು ನಡೆಯುತ್ತಿರುವ ಹೋರಾಟಗಳ ಬಗ್ಗೆ ಸರ್ಕಾರ ಕಾನೂನಾತ್ಮಕ ಕ್ರಮ ಕೈಗೊಳ್ಳಲಿದೆ ಎಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ವೇಳೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಅವರ ಭಾವನೆ ಹೇಳಿಕೊಳ್ಳುವ, ಬೇಡಿಕೆ ಮಂಡಿಸುವ ಅವಕಾಶವಿದೆ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಮಾತನಾಡುವುದು ಸಹಜ. ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಲು ಅವರು ಮಾಡುತ್ತಿರುವ ಯಾವ ಪ್ರಯತ್ನವೂ ಫಲ ನೀಡುವುದಿಲ್ಲ ಎಂದರು.

ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 

Related