ದೇಶದ ಪ್ರಧಾನಿಯಿಂದಲೇ ಈಗ ಗ್ಯಾರಂಟಿ ಪ್ರಚಾರ: ಡಿಸಿಎಂ ವ್ಯಂಗ್ಯ

ದೇಶದ ಪ್ರಧಾನಿಯಿಂದಲೇ ಈಗ ಗ್ಯಾರಂಟಿ ಪ್ರಚಾರ: ಡಿಸಿಎಂ ವ್ಯಂಗ್ಯ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಾವು ವಿಧಾನಸಭಾ  ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿದ್ದಕ್ಕೆ ದೇಶದ ಪ್ರಧಾನಿ ಆಗಿರುವಂತಹ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಗಳನ್ನು ಟೀಕಿಸಿದ್ದರು. ಆದರೆ ಈಗ ದೇಶದ ಪ್ರಧಾನಿ ಅವರೇ ಗ್ಯಾರಂಟಿ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ,

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದವರು, ಈಗ ಅವರೇ ಗ್ಯಾರಂಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು. ಅನಂತ್‌ಕುಮಾರ್‌ ಹೆಗಡೆ ಹೇಳಿಕೆಗೆ ಬಿಜೆಪಿ ನಾಯಕರು, ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿ ಅವರ ಹೇಳಿಕೆ ಸರಿಯಿಲ್ಲ ಎನ್ನುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಿದ್ದಾರೆ. ಹೀಗಾಗಿ ನಾನು ಪುನಃ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದರು.

 

Related