ಯತ್ನಾಳ್ ಪರ ಎಚ್ ವಿಶ್ವನಾಥ್ ಬ್ಯಾಟಿಂಗ್

ಯತ್ನಾಳ್ ಪರ ಎಚ್ ವಿಶ್ವನಾಥ್ ಬ್ಯಾಟಿಂಗ್

ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಆರೋಪದಲ್ಲಿ ನ್ಯಾಯವಿದೆ. ಅವರು ಪಕ್ಷ, ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿಲ್ಲ, ಜನ ವಿರೋಧಿ ಭಾಷಣಗಳನ್ನೂ ಮಾಡಿಲ್ಲ, ಸರ್ಕಾರದ ರೀತಿ ನೀತಿಗಳ ಬಗ್ಗೆ ಹೇಳಿದ್ದಾರೆ ಎಂದು ವಿಧಾನ ಪರಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿ, ಮುಖ್ಯಮಂತ್ರಿಗಳ ಕುಟುಂಬ, ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಮಂತ್ರಿಗಳ ನಿರಾಸಕ್ತಿ, ಅವರ ನಡವಳಿಕೆ ಬಗ್ಗೆ ಹೇಳಿದ್ದಾರೆ ಎಂದಿದ್ದಾರೆ.

ಪ್ರತಿಪಕ್ಷಗಳೇ ಸುಮ್ಮನಾದರೆ ಮತ್ತಿನ್ನೇನು ಮಾಡಬೇಕು. ಸಿದ್ದರಾಮಯ್ಯ, ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲೇ ಮಾತನಾಡಿದ್ದಾರೆ ಎಂದು ಹೇಳಿದರು.

ವಿವಿಧ ಸಮುದಾಯಗಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಚಳುವಳಿ, ಹೋರಾಟ ಹೆಚ್ಚಾಗುತ್ತಿದೆ. ಮೇಲ್ವರ್ಗದಿಂದ ಹಿಡಿದು ಎಲ್ಲರೂ ಬೀದಿಗಿಳಿದಿದ್ದಾರೆ. ಜನತಂತ್ರ ವ್ಯವಸ್ಥೆಯಲ್ಲಿ ಕೇಳಲು ಅವಕಾಶವಿದೆ. ಜನರಿಗೆ ಸರ್ಕಾರ ತಿಳುವಳಿಕೆ ನೀಡಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಬರಿ ಮನವಿ ಸ್ವೀಕರಿಸಿದ್ರೆ ಎಲ್ಲವೂ ಮುಗಿಯಲ್ಲ.

ಪಂಚಮಸಾಲಿ ಯತಿಗಳು ಈಗಾಲೇ ಘೋಷಿಸಬೇಕು ಅಂತಾರೆ, ಕುರುಬ ಸಮುದಾಯ ಕೂಡ ಮೀಸಲಾತಿ ಕೇಳ್ತಿದೆ. ಕುಲಶಾಸ್ತç ಅಧ್ಯಯನ ಆಗಬೇಕಿದೆ. ಕೇಳುತ್ತಲೇ ಕೊಡೋದಕ್ಕೆ ಬರುವುದಿಲ್ಲ, ಸರ್ಕಾರ ನಮಗೆ ಸಂಬಂಧವೇ ಇಲ್ಲ ಅಂತ ಸುಮ್ಮನಿದೆ ಎಂದರು.

Related