ಶಿವಶಂಕರಪ್ಪ ವಿರುದ್ಧ ಎಚ್ ವಿಶ್ವನಾಥ್ ವಾಗ್ದಾಳಿ

ಶಿವಶಂಕರಪ್ಪ ವಿರುದ್ಧ ಎಚ್ ವಿಶ್ವನಾಥ್ ವಾಗ್ದಾಳಿ

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ ವೈ ರಾಘವೇಂದ್ರರನ್ನು ಗೆಲ್ಲಿಸಿ ಎಂದು ಕರೆ ನೀಡಿದ ಶಾಮನೂರು ಶಿವಶಂಕರಪ್ಪನವರು ಯಾವ ಹಿರಿಯ ಮುತ್ಸದ್ದಿಯೂ ಅಲ್ಲ. ಎಲ್ಲ ಜಾತಿವಾದಿ ಮುತ್ಸದ್ದಿಗಳು ಎಂದು ಎಚ್ ವಿಶ್ವನಾಥ್ ಅವರು ಶಾಮನೂರು ಶಂಕರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂತವರು ಪಕ್ಷದಲ್ಲಿದ್ದರೆ ಪಕ್ಷಕ್ಕೆ ಅವಮಾನ, ಹಾಗಾಗಿ ಇಂತವರನ್ನು ಪಕ್ಷದಿಂದ ಕಿತ್ತೆಸೆದರೆ ಮಾತ್ರ ಪಕ್ಷಕ್ಕೆ ಗೌರವ ಎಂದರು. ಸ್ವಪಕ್ಷ ಬಿಟ್ಟು ಬೇರೆ ಪಕ್ಷಗಳಿಗೆ ಪ್ರಚಾರ ಮಾಡಲು ಹೊರಟಿರುವವರಿಗೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇಟ್ಟುಕೊಳ್ಳಬಾರದು ಅವರನ್ನು ಪಕ್ಷದಿಂದ ಕಿತ್ತೆಸೇರಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಜೀವಂತವಾಗಿದ್ರೆ ಮೊದ್ಲು ಅವನನ್ನ ಪಾರ್ಟಿಯಿಂದ ಸಸ್ಪೆಂಡ್ ಮಾಡ್ಲಿ. ಶ್ಯಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಶಾಸಕರಾಗಿದ್ದಾರೆ, ಮಗ ಮಂತ್ರಿಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿದ್ದುಕೊಂಡೇ, ಕಾಂಗ್ರೆಸ್ ಅಧಿಕಾರ ಅನುಭವಿಸಿಕೊಂಡೇ ಬೇರೆ ಪಾರ್ಟಿಗೆ ಕ್ಯಾನ್ವಸ್ ಮಾಡ್ತಿಯಲ್ಲ ಏನು ಹೇಳಬೇಕು ನಿನಗೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

 

Related