ಹಾಲಶ್ರೀ ಸ್ವಾಮೀಜಿ ಬಂಧನ

ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು, ಸೆ.19: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಂದ ಕೊಡಿಸುವುದಾಗಿ 5 ಕೋಟಿ ರೂ. ಹಣ ಪಡೆದು ವಂಚಿಸಿ ತಲೆಮರೆಸಿ ಕೊಂಡಿದ್ದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಯನ್ನು ಒಡಿಶಾದ ಕಟಕ್‍ನಲ್ಲಿ ಇಂದು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಉಡುಪಿಯಲ್ಲಿ ಚೈತ್ರಾಳನ್ನು ಬಂಧಿಸಿ ನಂತರ ಶೋಧ ಮುಂದುವರೆಸಿದಾಗ ಹಾಲಶ್ರೀ ಸ್ವಾಮೀಜಿ ಮಠದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂದಿನಿಂದ ಇವರ ಶೋಧ ಕಾರ್ಯ ಮುಂದುವರೆದಿತ್ತು.

ಸ್ವಾಮೀಜಿ ಒಡಿಸ್ಸಾದಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಅಲ್ಲಿಗೆ ತೆರಳಿದ್ದ ಸಿಸಿಬಿ ಪೊಲೀಸರ ಒಂದು ತಂಡ ಅಲ್ಲಿನ ಪೊಲೀಸರ ನೆರವಿನಿಂದ ಇಂದು ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಭುವನೇಶ್ವರದಿಂದ ಬೋಧಗಯಾಗೆ ಸ್ವಾಮೀಜಿ ಪ್ರಯಾಣಿಸುತ್ತಿದ್ದಾಗ ಸಿನಿಮೀಯ ರೀತಿ ಬಂಧಿಸಿದೆ.

Related