ಬಳ್ಳಾರಿ : ತಾಲೂಕಿನ ಕಮಲಾಪುರ ಹತ್ತಿರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸ. ಚಿ. ರಮೇಶ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ವಿಶ್ವವಿದ್ಯಾಲಯ ಆವರಣದಲ್ಲಿರುವ ಪ್ರೊ. ರಮೇಶ್ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಸೋಂಕು ನಿರೋಧಕ ದ್ರಾವಣ ಸಿಂಪಡಿಸಿದ್ದಾರೆ. ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿಗೆ ಐದು ದಿನಗಳ ರಜೆಯನ್ನು ಘೋಷಣೆ ಮಾಡಲಾಗಿತ್ತು.
ಆಗಸ್ಟ್ ೧ ರಂದು ರ್ಯಾಪಿಡ್ ಪರೀಕ್ಷೆ ಮಾಡಿಸಿಕೊಂಡಾಗ ನೆಗೆಟಿವ್ ಬಂದಿತ್ತು. ಗಂಟಲು ದ್ರವ ಪರೀಕ್ಷೆಯಿಂದ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.