ಹಾರ್ದಿಕ್ ಪಟೇಲ್ ರಿಂದ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ

ಹಾರ್ದಿಕ್ ಪಟೇಲ್ ರಿಂದ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಯುವ ಮೋರ್ಚಾ ಎಲ್ಲರೂ ಸೇರಿಕೊಂಡು ಬಿಜೆಪಿ ಅಭ್ಯರ್ಥಿಯಾದ ಶ್ರೀಧರ್ ರೆಡ್ಡಿಯನ್ನು ಗೆಲ್ಲಿಸಲು ಪಣತೊಟ್ಟು ಪ್ರಚಾರದಲ್ಲಿ ತೊಡಗಿದ್ದಾರೆ ಎಂದು  ಗುಜರಾತ್ ಶಾಸಕರಾದ ಹಾರ್ದಿಕ್ ಪಾಟೇಲ್ ಹೇಳಿದರು.

ಅವರು ಇಂದು ಬಿಟಿಎಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀಧರ್ ರೆಡ್ಡಿ ಅವರ ಪರವಾಗಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ ಅದರಂತೆ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯಾದ ಶ್ರೀಧರ್ ರೆಡ್ಡಿ ಅವರು ಗೆಲ್ಲುತ್ತಾರೆ ಎಂದು ನುಡಿದರು.

ಕಾಂಗ್ರೆಸ್ ನಲ್ಲಿ ಯಾವುದೇ ರೀತಿ ಅಳತೆ ಇಲ್ಲ ಆದ್ದರಿಂದ ಕಾಂಗ್ರೆಸ್ ಪಕ್ಷ ಮುಸಲ್ಮಾನರಿಗೆ ಯಾವ ರೀತಿಯ ಮೀಸಲಾತಿಯನ್ನು ಕೊಡುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿ ಪಕ್ಷದಲ್ಲಿ ಪಕ್ಷದ ಬಗ್ಗೆ ಒಂದು ಅಳತೆ ಇದೆ, ಆದ್ದರಿಂದ ಎಲ್ಲ ರೀತಿಯಲ್ಲೂ ಎಲ್ಲ ವರ್ಗದವರಿಗೆ ಸಂಸ್ಕೃತಿಯನ್ನು ಕಲಿಸಿಕೊಡುತ್ತದೆ ಎಂದು ಹೇಳಿದರು

ಪ್ರಧಾನಮಂತ್ರಿಯವರು ಹೇಳಿರುವ ಹಾಗೆ ಇಲ್ಲಿರುವಂತಹ ನವ ಯುವಕರಿಗೆ ಒಂದು ಒಳ್ಳೆಯ ಅವಕಾಶ ಬೇಕಾಗಿದೆ ಆ ಅವಕಾಶವನ್ನು ಭಾರತೀಯ ಜನತಾ ಪಕ್ಷ ನೀಡಿರುವುದರಿಂದ ಇದನ್ನು ಕರ್ನಾಟಕದಲ್ಲಿರುವಂತಹ ಜನರು ಉಪಯೋಗಿಸಿಕೊಳ್ಳಬೇಕೆಂದು ಮೋದಿಯವರು ತಿಳಿಸಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಮಂಡಲ ಬಿಜೆಪಿ ಅಧ್ಯಕ್ಷ ರಾಜೇಂದ್ರ ರೆಡ್ಡಿ, ಮಡಿವಾಳ ವಾರ್ಡ್ ಅಧ್ಯಕ್ಷರು ಹಾಗೂ ಇತರ ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Related