ಹ್ಯಾಟ್ರಿಕ್ ಹೀರೋನ ಹೊಸ ಸಿನಿಮಾ ಘೋಷಣೆ

ಹ್ಯಾಟ್ರಿಕ್ ಹೀರೋನ ಹೊಸ ಸಿನಿಮಾ ಘೋಷಣೆ

ಬೆಂಗಳೂರು: ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಕೆಲವು ತಿಂಗಳುಗಳ ಕಾಲ ಚಿತ್ರಿಕರಣದಿಂದ ದೂರ ಉಳಿದಿದ್ದ ಅವರು ಮತ್ತೆ ಇದೀಗ ತಮ್ಮ ಆರೋಗ್ಯವನ್ನು ಸುಧಾರಿಸಿಕೊಂಡು ಚಿತ್ರೀಕರಣಕ್ಕೆ ಮುಂದಾಗಿದ್ದಾರೆ.

ಹೌದು, ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಇದೀಗ ಹೊಸ ಸಿನಿಮಾ ಒಂದರಲ್ಲಿ ನಟಿಸುವುದಾಗಿ ಘೋಷಣೆ ಮಾಡಿದ್ದಾರೆ. ಡಾ. ರಾಜಕುಮಾರ್ ಅವರ ಜನ್ಮದಿನದ ಒಂದು ದಿನ ಮುಂಚಿತವಾಗಿ ಸಿನಿಮಾ ಅನೌನ್ಸ್ ಮಾಡಲಾಗಿದೆ ಇದು ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಖುಷಿ ತಂದಾಗಿದೆ.

‘ಶ್ರಿತಿಕ್ ಮೋಷನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಸಾಗರ್, ಕೃಷ್ಣಕುಮಾರ್ ಹಾಗೂ ಸೂರಜ್ ಶರ್ಮ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಖಾಸಗಿ ಕಾರ್ಯಕ್ರಮದಲ್ಲಿ ದಚ್ಚು-ವಿಜಿ ಜೊತೆ ಜೊತೆಯಲಿ

ತಮಿಳಿನ ‘ಇದಿ ಮಿನ್ನಲ್ ಕಾದಲ್’ ಹೆಸರಿನ ಚಿತ್ರವನ್ನು ಬಾಲಾಜಿ ಮಾಧವನ್ ನಿರ್ದೇಶನ ಮಾಡಿದ್ದರು. ಈಗ ಅವರಿಗೆ ಕನ್ನಡದಲ್ಲಿ ಇದು ಮೊದಲ ಅನುಭವ. ಬಾಲಾಜಿ ಮಾಧವನ್ ಅವರು ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರಿಯ ಪುತ್ರ ಅನ್ನೋದು ವಿಶೇಷ.

ಇನ್ನು ಇತ್ತೀಚೆಗೆ ನಿರ್ದೇಶಕ ಬಾಲಾಜಿ ಮಾಧವನ್ ಹಾಗೂ ನಿರ್ಮಾಪಕರಾದ ಸಾಗರ್, ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಸ್ವಗೃಹದಲ್ಲೇ ಈ ಭೇಟಿ ನಡಿದೆ. ಈ ವೇಳೆ ಚಿತ್ರದ ಕುರಿತು ಮಾತುಕತೆ ನಡೆದಿದೆ. ಸಿನಿಮಾದ ಕಥೆ ಕೇಳಿದ ಶಿವಣ್ಣ ಸಂತೋಷಗೊಂಡಿದ್ದಾರೆ.

ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಶೀಘ್ರವೇ ಇದನ್ನು ಅನಾವರಣಮಾಡುವ ಆಲೋಚನೆ ತಂಡಕ್ಕೆ ಇದೆ. ಈ ವೇಳೆ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

ರಾಜಕುಮಾರ ಹುಟ್ಟು ಹಬ್ಬದ ಒಂದು ದಿನದ ಮುಂಚಿತವಾಗಿ ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಅವರು ಸಿಹಿ ಸುದ್ದಿಯನ್ನು ನೀಡಿರುವುದು ಸಂತಸದ ಸಂಗತಿ.

ಒಟ್ಟಿನಲ್ಲಿ ಅದೇನೆ ಆಗಲಿ ಶಿವರಾಜ್ ಕುಮಾರ್ ಅವರು ಮತ್ತೆ ಬಣ್ಣ ಹಚ್ಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಖುಷಿ ತಂದಂತಾಗಿದೆ.

Related