ಎಲೆಕ್ಷನ್ ಬಂದಾಗೆಲ್ಲ ಎಚ್.ಡಿ.ಕೆಗೆ ಹೃದಯ ಸಮಸ್ಯೆ ಕಾಡುತ್ತದೆ: ರಮೇಶ್

ಎಲೆಕ್ಷನ್ ಬಂದಾಗೆಲ್ಲ ಎಚ್.ಡಿ.ಕೆಗೆ ಹೃದಯ ಸಮಸ್ಯೆ ಕಾಡುತ್ತದೆ: ರಮೇಶ್

ಮಳವಳ್ಳಿ: ಪ್ರತಿ ಸಾರಿ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೃದಯ ಸಮಸ್ಯೆ ಎದುರಾಗುವುದು ಸರ್ವೇಸಾಮಾನ್ಯವಾಗಿದೆ ಎಂದು ಶ್ರೀರಂಗಪಟ್ಟಣದ ಕ್ಷೇತ್ರದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರು ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹೃದಯ ಸಮಸ್ಯೆ ಎಂದರು ಆಸ್ಪತ್ರೆಗೆ ದಾಖಲಾಗಿ ಕೇವಲ ಮೂರು ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಅದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಹೃದಯ ಸಮಸ್ಯೆ ಇದ್ದವರು, ಹೃದಯ ಚಿಕಿತ್ಸೆ ಪಡೆಯುವವರು ಸುಮಾರು ಒಂದು ವಾರದಿಂದ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಾಗುತ್ತದೆ ಆದರೆ ಎಚ್ ಡಿ ಕುಮಾರಸ್ವಾಮಿ ಅವರು ಮಾತ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೇವಲ ಮೂರು ದಿನದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ

ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಎರಡೇ ದಿನಕ್ಕೆ ಮನೆಗೆ ಬಂದು ಮರುದಿನದಿಂದಲೇ ಎಲ್ಲೆಡೆ ಸುತ್ತಾಡುತ್ತಿರುತ್ತಾರೆ. ಈ ಪವಾಡ ನಮಗೆ ತಿಳಿಯುತ್ತಿಲ್ಲ ಎಂದರು.

ನಮ್ಮ ಚಲುವರಾಯಸ್ವಾಮಿ ಅವರಿಗೂ ಅದೇ ರೀತಿ ಹೃದಯದ ಸಮಸ್ಯೆ ಇದೆ. ಇವರು ಆಸ್ಪತ್ರೆ ಸೇರಿದರೆ ತಿಂಗಳಾನುಗಟ್ಟಲೆ ಹೊರಗೆ ಬರೋದೇ ಇಲ್ಲ. ಆದರೆ, ಕುಮಾರಸ್ವಾಮಿ ಅವರು ಆಪರೇಷನ್ ಆದ ಎರಡೇ ದಿನಕ್ಕೆ ಹೊರಗೆ ಬರುತ್ತಾರೆ. ಈ ಹೊಸ ಟೆಕ್ನಿಕ್ ಹೇಗೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದರು.

 

 

Related