ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಎಚ್.ಡಿ.ಕೆ

ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಎಚ್.ಡಿ.ಕೆ

ರಾಮನಗರ : ಜಾಲಮಂಗಲದ ಲಕ್ಷ್ಮಿ ನಾರಾಯಣಸ್ವಾಮಿ ದೇಗುಲದಲ್ಲಿ ಶುಕ್ರವಾರ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದ ಎಚ್.ಡಿ. ಕುಮಾರಸ್ವಾಮಿ, ದೇವರಿಗೆ 101 ತಪ್ಪು ಕಾಣಿಕೆ ಅರ್ಪಿಸಿದರು.

ಈ ಹಿಂದೆ ಹೆಚ್‌ಡಿಕೆ ಇದೇ ದೇವರ ಮುಂದೆ ‘ನನಗೆ ಯಾವುದೇ ಅಧಿಕಾರ ಬೇಡ’ ಎಂದಿದ್ದರು. ಆದರೆ ನಂತರದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆದರೂ ಅಧಿಕಾರ ಅರ್ಧಕ್ಕೆ ಮೊಟಕಾಗಿತ್ತು.
ಈ ಕೊರಗು ನೀಗಿಸಿಕೊಳ್ಳಲು ಕುಮಾರಸ್ವಾಮಿ ದೇವರಿಗೆ ಕಾಣಿಕೆ ಅರ್ಪಿಸಿ, ಹಿಂದೆ ತಮ್ಮಿಂದ ಆಗಿರುವ ತಪ್ಪನ್ನು ಮನ್ನಿಸುವಂತೆ ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಕುಮಾರಸ್ವಾಮಿ ‘2004ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಲಕ್ಷ್ಮಿ ನರಸಿಂಹಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವ ಈ ಕ್ಷೇತ್ರದ ಪ್ರತಿಯೊಬ್ಬರೂ ಸಂತೋಷದಿಂದ  ಬದುಕುವಂತೆ ಮಾಡಬೇಕು. ಅಲ್ಲಿಯವರೆಗೂ ಮಂತ್ರಿಸ್ಥಾನಕ್ಕೆ ಆಸೆ ಪಡಲ್ಲ’ ಎಂದು ಅವರೆದುರು ಭಾಷಣ ಮಾಡಿದ್ದೆ. ಹೀಗಾಗಿ ಕುಟುಂಬ ಸಮೇತ ಬಂದು ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಕೇಳಿದ್ದೇನೆ.

ಈ ಸಂದರ್ಭದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅವರ ಪತ್ನಿ ರೇವತಿ, ಮಾಗಡಿ ಶಾಸಕ ಎ.ಮಂಜುನಾಥ ಇದ್ದರು.

Related