ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ರಣತಂತ್ರ ಹೆಣೆಯುತ್ತಿದ್ದು ಈ ಬಾರಿ 28 ಕ್ಷೇತ್ರಗಳಲ್ಲಿ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿದ್ದು ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.
ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸುಮಾರು ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ನಿನ್ನೆ ಪ್ರಧಾನಿಯಾದ ನರೇಂದ್ರ ಮೋದಿಯವರ ಭೇಟಿ ಮಾಡಿದ ನಂತರ ಮಾಹಿತಿ ಹೊರಬಿದ್ದಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಇನ್ನು ನಾಲ್ಕು ಕ್ಷೇತ್ರಗಳ ಪೈಕಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಒಂದು ಕ್ಷೇತ್ರದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತಾರೆ ಎಂದು ಹೇಳಲಾಗುತ್ತಿದೆ.
ಇನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧಿಸಲೆಂದು ಬಿಜೆಪಿ ಹೈಕಮಾಂಡ್ ತಿಳಿಸಿದೆ ಎಂದು ಹೇಳಲಾಗುತ್ತಿದೆ.