ಭಾರಿ ಮಳೆ: ರಸ್ತೆ ಸಂಪರ್ಕ ಕಡಿತ

ಬಳ್ಳಾರಿ: ಸೀಮಾಂಧ್ರದಲ್ಲಿ ಸುರಿದ ಭಾರಿ ಮಳೆಗೆ ಮಣ್ಣಿನ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡು ವಾಹನಗಳು ಸಾಲುಗಟ್ಟಿ ನಿಂತಿವೆ.

ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದ ಹತ್ತಿರವಿರುವ ಯಲ್ಲಮ್ಮನ ಹಳ್ಳದ ಸೇತುವೇ ಕಾಮಗಾರಿ ನಡೆಯುತ್ತಿದ್ದು, ಅಂತರ್‍ರಾಜ್ಯ ಸೀಮಾಂದ್ರಕ್ಕೆ ಓಡಾಡುವ ವಾಹನಗಳಿಗೆ ತೊಂದರೆಯಾಗದಂತೆ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಾಣ ಮಾಡಲಾಗಿತ್ತು.

ಸೀಮಾಂಧ್ರದಲ್ಲಿ ಸುರಿದ ಭಾರಿ ಮಳೆಗೆ ನಿನ್ನೆ ರಾತ್ರಿ ಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಮಣ್ಣಿನ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಇದರಿಂದಾಗಿ ವಾಹನಗಳ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡು ವಾಹನಗಳು ಸಾಲುಗಟ್ಟಿ ನಿಂತಿವೆ.

Related