ಮೈದುಂಬಿ ಹರಿಯುತ್ತಿದ್ದಾಳೆ ಮಲೆನಾಡ ಸುಂದರಿ

ಮೈದುಂಬಿ ಹರಿಯುತ್ತಿದ್ದಾಳೆ ಮಲೆನಾಡ ಸುಂದರಿ

ಶಿವಮೊಗ್ಗ : ಶಿವಮೊಗ್ಗದ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ.
ಗಾಜನೂರಿನ ತುಂಗಾ ಡ್ಯಾಂಗೆ ಒಳಹರಿವು ಹೆಚ್ಚಳ ಹಿನ್ನೆಲೆ ತುಂಗಾ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಬಿಡುಗಡೆಗೊಳಿಸಲಾಗಿದೆ. ಇದರಿಂದ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ.

ಶಿವಮೊಗ್ಗದ ಕೋರ್ಪಲಯ್ಯ ಛತ್ರದ ಮಂಟಪ ಮುಳಗಿದ್ದು, ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ರವರು ತುಂಗಾನದಿಗೆ ಬಾಗೀನ ಅರ್ಪಿಸಿ ಶಾಂತ ರೀತಿಯಲ್ಲಿ ಹರಿಯಲು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.

Related