ಕೈ ನಾಯಕರಿಗೆ ಹೈಕಮಾಂಡ್ ಮಹತ್ವದ ಸೂಚನೆ

ಕೈ ನಾಯಕರಿಗೆ ಹೈಕಮಾಂಡ್ ಮಹತ್ವದ ಸೂಚನೆ

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿದ್ದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಮಹತ್ವದ ಸೂಚನೆಯನ್ನು ನೀಡಿದೆ.

ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪರವಾದ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಮೈ ಮರೆಯದಂತೆ ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದೆ.

ಈಗಾಗಲೇ ಗೆದ್ದಿದ್ದೇವೆ ಎಂಬ ಅತಿಯಾದ ವಿಶ್ವಾಸದಲ್ಲಿ ಕೆಲವು ಅಭ್ಯರ್ಥಿಗಳು ಪ್ರಚಾರದ ಬಿರುಸನ್ನು ಕಡಿಮೆ ಮಾಡುತ್ತಿದ್ದಾರೆ ಎಂಬ ಅಸಮಧಾನಗಳು ವ್ಯಕ್ತವಾಗಿವೆ. ಕಾರ್ಯಕರ್ತರು ಹಗಲು-ರಾತ್ರಿ ಎನ್ನದೆ ಚುನಾವಣಾ ಕಣದಲ್ಲಿ ಬೆವರು ಹರಿಸುತ್ತಿದ್ದರೆ, ಅಭ್ಯರ್ಥಿಗಳು ಉಡಾಫೆ ಪ್ರವೃತ್ತಿಗೆ ಜಾರಿದ್ದಾರೆ ಎಂಬ ಮಾಹಿತಿಗಳಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯ ಮತ್ತಷ್ಟು ಪ್ರಧಾನಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳನ್ನು ಚುನಾವಣಾ ಉಸ್ತುವಾರಿಗೆ ನಿಯೋಜನೆ ಮಾಡಿದೆ.

ಯಾವುದೇ ಹಂತದಲ್ಲೂ ರಣಕಣದಿಂದ ಹಿಂದೇಟು ಹಾಕಬಾರದು. ಇದು ಸಾಮಾನ್ಯವಾಗಿ ಪರಿಗಣಿಸಬಹುದಾದ ಚುನಾವಣೆ ಅಲ್ಲ. ಕಾಂಗ್ರೆಸ್ ಪಾಲಿಗೆ ಮಾಡು ಇಲ್ಲವೇ, ಮಡಿ ಮಾದರಿಯ ಹೋರಾಟವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಯ ಗೆಲುವು ಕೂಡ ಬಹಳ ಮುಖ್ಯವಾಗಿದೆ. ಯಾರು ಮೈ ಮರೆಯಬಾರದು ಎಂಬ ಸಂದೇಶ ರವಾನೆ ಮಾಡಲಾಗಿದೆ.

 

Related