ಹಿಟಾಚಿಗೆ ಕಾರು ಡಿಕ್ಕಿಗೆ ಓರ್ವ ಸಾವು

ಹಿಟಾಚಿಗೆ ಕಾರು ಡಿಕ್ಕಿಗೆ ಓರ್ವ ಸಾವು

ಚಿತ್ರದುಗ : ಬಿ.ಡಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪ ಹಿಟಾಚಿ ಹಾಗೂ ಕಾರು ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ತಿರುಮಲ ಡಾಬಾ ಮಾಲೀಕ ಕೆಂಚಪ್ಪ (39) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದಾರೆ.

ಕೆಂಚಪ್ಪ  ಅವರು ಕಾರಿನಲ್ಲಿ ಚಳ್ಳಕೆರೆ ಗೇಟ್‌ನಿಂದ ಬಿ.ಡಿ. ರಸ್ತೆಯ ಮಾರ್ಗವಾಗಿ ಸಾಗುತ್ತಿದ್ದರು. ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ರಸ್ತೆಯಲ್ಲಿ ಹಾಕಿದ್ದ ಮಣ್ಣಿನ ದಿಬ್ಬವನ್ನು ದಾಟಿದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಹಿಟಾಚಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ನಸುಕಿನಲ್ಲಿ ಮೃತಪಟ್ಟಿದ್ದಾರೆ.

ಪ್ರಗತಿಯಲ್ಲಿರುವ ಕಾಮಗಾರಿಗೆ ಮುನ್ನೆಚ್ಚರಿಕೆ ಕ್ರಮ ಅನುಸರಿಸದೇ ಇರುವುದು ಅಪಘಾತಕ್ಕೆ ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೀಮ ಆರ್ಮಿಯ ಕಾರ್ಯಕರ್ತರೊಬ್ಬರು ಫೇಸ್‌ಬುಕ್ ಲೈವ್ ನಡೆಸಿ ರಸ್ತೆ ಕಾಮಗಾರಿಯ ಅವ್ಯವಸ್ಥೆಯನ್ನು ಬಿಡಿಸಿಟ್ಟಿದ್ದಾರೆ. ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

Related