ಹಾಲಿ, ಮಾಜಿಗಳ ಭೇಟಿ : ಕೂತುಹಲ

ಹಾಲಿ, ಮಾಜಿಗಳ ಭೇಟಿ : ಕೂತುಹಲ

ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ನೀಡಿದರು.

ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಹಿನ್ನಲೆಯಲ್ಲಿ ಉಭಯ ನಾಯಕರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಅವರ ಸಂಪುಟ ಸಹೋದ್ಯೋಗಿಯಾಗಿರುವ ಯೋಗೀಶ್ವರ್ ತಿರುಗಿಬಿದ್ದಿದ್ದು, ಯೋಗೀಶ್ವರ್ ಹಾಗೂ ಕುಮಾರಸ್ವಾಮಿ ರಾಜಕೀಯ ಎದುರಾಳಿಗಳೆಂಬುದು ಗಮನಾರ್ಹ ವಿಚಾರವಾಗಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಯೋಗೀಶ್ವರ್ ಅವರ ಹೇಳಿಕೆಯೊಂದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಜಿ.ಪಂ, ತಾ.ಪಂ ಮೀಸಲಾತಿ ಕುರಿತಂತೆ ಯೋಗೀಶ್ವರ್ ಬಾಲಿಶ ಹೇಳಿಕೆ ನೀಡಿದ್ದಾರೆ.

Related