ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಬಡವರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದರ ಜೊತೆಗೆ ಉಚಿತವಾಗಿ ಊಟದ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸುವ ಲಾಗುತ್ತಿರುವ ಸಿದ್ಧಗಂಗಾ ಮಠವು ನಮ್ಮ ರಾಜ್ಯದ ಹೆಮ್ಮೆಯಾಗಿದೆ.

ಇನ್ನು ಸಿದ್ದಗಂಗಾ ಮಠಕ್ಕೆ ಬುನಾದಿಯನ್ನು ನಿರ್ಮಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೆಯ ಜಯಂತೋತ್ಸವವನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ಆಚರಿಸಲಾಯಿತು.

ಗೃಹ ಸಚಿವ ಡಾ. ಪರಮೇಶ್ವರ ಅವರು ಮತ್ತು ವಿವಿಧ ಮಠಾಧೀಶರುಗಳು ಸೇರಿಕೊಂಡು ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೆಯ ಜಯಂತೋತ್ಸವವನ್ನು ಆಚರಿಸಲಾಯಿತು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿವಿಧ ಮಠಾಧೀಶರು ಹಾಗೂ ಭಕ್ತರು ಭಾಗಿಯಾಗಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಗದ್ದುಗೆ ದರ್ಶನ ಪಡೆದರು.

 

Related