ಯುವಕರು ನೀರುಪಾಲು

ಯುವಕರು ನೀರುಪಾಲು

ಗುಬ್ಬಿ, ಫೆ. 13: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಬಾಯ್ಸ್ ಹಾಸ್ಟೆಲ್ ನಲ್ಲಿದ್ದ 3 ಜನ ಹುಡುಗರು ನೀರುಪಾಲಾಗಿದ್ದಾರೆ.

ಎಸ್ಸಿ, ಎಸ್ಟಿ ಹಾಸ್ಟೆಲ್ ನಲ್ಲಿ ಓದುತ್ತಿದ್ದಂಹ 8 ನೇ ತರಗತಿಯ ಒಬ್ಬ ಮತ್ತು 9 ನೇ  ತರಗತಿಯ ಇಬ್ಬರು ಒಟ್ಟು ಮೂರುಜನ ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

9 ನೇ ತರಗತಿಯ ಶ್ರೀನಿವಾಸ್, ದರ್ಶನ್ ಮತ್ತು ನಂದನ್ 8 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಗುಬ್ಬಿ ಕೆರೆಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಮೂರು ಜನ ಹುಡುಗರು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Related