ಖತರ್ನಾಕ್ ಪತಿ ಬಂಧನ!

ಖತರ್ನಾಕ್ ಪತಿ ಬಂಧನ!

ಕಾರವಾರ : ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಗುಂಡು ಹೊಡೆದ ಪತಿಯನ್ನು ಕದ್ರಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೋಯರ ಗ್ರಾಮದ ರಮೇಶ ದೇಸಾಯಿ ಬಂಧಿತ ಆರೋಪಿ ಆತನ ಪತ್ನಿ ರಸಿಕಾ ತೀವ್ರವಾಗಿ ಗಾಯಗೊಂಡಿದ್ದು, ಸರ್ಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಪತಿ-ಪತ್ನಿಯ ನಡುವೆ ಸದಾ ಜಗಳವಾಗುತ್ತಿತ್ತು. ಇದರಿಂದ ಡಿ.4 ರಂದು ಕಾಡಿಗೆ ಕರೆದೊಯ್ದು, ಕಾಡು ಪ್ರಾಣಿ ಹೊಡೆಯಲು ಇರುವ ಕಾಡತೂಸಿನಿಂದ ಗುಂಡು ಹಾರಿಸಿದ್ದ. ಆದರೆ, ಕಟ್ಟಿಗೆ ತರಲು ಕಾಡಿಗೆ ಹೋದಾಗ ಅಪರಿಚಿತ ಬೇಟೆಗಾರರು ಗುಂಡು ಹಾರಿಸಿ ಗಾಯವಾಯಿತು ಎಂದು ಹೇಳಿದ್ದ.

ಅನುಮಾನಗೊಂಡ ಪೊಲೀಸರು ಗಾಯಾಳು ರಸಿಕಾಳನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆಕೆ ನಡೆದ ಘಟನೆ ಬಾಯ್ಬಿಟ್ಟಿದ್ದಾಳೆ. ಪೊಲೀಸರು ರಮೇಶನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related