ಪತ್ನಿಯ ಕೊಂದ ಪಾಪಿ ಪತಿ

ಪತ್ನಿಯ ಕೊಂದ ಪಾಪಿ ಪತಿ

ರಾಯಚೂರು :  ನಗರದ ಮಹಿಳಾ ಸಮಾಜ ಆವರಣದಲ್ಲಿನ ಪಾಳು ಕೋಣೆಯಲ್ಲಿ ಪತ್ತೆಯಾಗಿದ್ದ ಶವದ ಕೊಲೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಅನೈತಿಕ ಸಂಬಂಧವೇ  ಕಾರಣ ಅನ್ನೋದು ಬಯಲಾಗಿದೆ.

ನವೆಂಬರ್ 30ರಂದು ದೇವನಪಲ್ಲಿಯ ಖಾಸಗಿ ಬ್ಯಾಂಕ್ ಉದ್ಯೋಗಿ 32 ವರ್ಷದ ಸೈಯದ್ ಇಮ್ರಾನ್ ಖಾದ್ರಿ ಶವವಾಗಿ ಪತ್ತೆಯಾಗಿದ್ದ. ಕೊಲೆ ಪ್ರಕರಣ ಆರೋಪಿ ರಾಯಚೂರಿನ ಬೈರೂನ್ ಕಿಲ್ಲಾ ನಿವಾಸಿ ಅಬ್ದುಲ್ ರಷೀದ್‌ನನ್ನು ಬಂಧಿಸಲಾಗಿದೆ. ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಅನುಮಾನದ ಮೇಲೆ ಆರೋಪಿಯನ್ನ ಬಂಧಿಸಿರುವ ಪೊಲೀಸರು ಸತ್ಯ ಬಾಯಿಬಿಡಿಸಿದ್ದಾರೆ.

ಸದರ ಬಜಾರ್ ಠಾಣಾ ಪೊಲೀಸರು ಘಟನೆ ನಡೆದು ಒಂದೇ ದಿನದಲ್ಲಿ ಪ್ರಕರಣ ಭೇದಿಸಿ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಧಿಕಾರಿಗಳು ಅತೀ ಕಡಿಮೆ ಸಮಯದಲ್ಲಿ ಆರೋಪಿಯನ್ನು ಬಂಧಿಸಿದ್ದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್ ತನಿಖಾ ತಂಡವನ್ನು ಅಭಿನಂದಿಸಿದ್ದಾರೆ.

Related